Tuesday, July 1, 2025
spot_imgspot_img
spot_imgspot_img

ಬ್ರಹ್ಮಾವರ: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು

- Advertisement -
- Advertisement -

ಬ್ರಹ್ಮಾವರ: ಇನ್ನೇನು ಕೆಲವೇ ಕ್ಷಣಗಳಲ್ಲಿ ತಾಳಿ ಕಟ್ಟುತ್ತೇನೆಂದು ನಂಬಿದ್ದ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವಕನ ಮದುವೆ ಮುರಿದು ಬಿದ್ದ ಘಟನೆ ಇಲ್ಲಿನ ಸಭಾಭವನದಲ್ಲಿ ಭಾನುವಾರ ನಡೆದಿದೆ.

ಮೂಲತಃ ಬ್ರಹ್ಮಾವರದವರಾಗಿದ್ದು, ವರ ವಿದೇಶದಲ್ಲಿ, ವಧು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದರೆ ಅವರಿಬ್ಬರು ಕೆಲವೇ ಕ್ಷಣಗಳಲ್ಲಿ ಸತಿಪತಿಗಳಾಗುತ್ತಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ. ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದು ಎಲ್ಲರಿದೂ ಅಘಾತವಾಗಿದೆ.

ಈ ಯುವಕ ಮತ್ತು ಯುವತಿ ನಡುವೆ ಸುಮಾರು 4 ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಇಬ್ಬರೂ ದೂರವಾಣಿ ಸಂಪರ್ಕದಲ್ಲಿದ್ದರು. ಮದುವೆ ಕ್ರಮಗಳೆಲ್ಲ ಮುಂದುವರಿದು ತಾಳಿ ಕಟ್ಟುವ ಸಂದರ್ಭ ಬಂದಾಗ ವಧು, ವರನನ್ನು ಅಲ್ಲಿಯೇ ಕೊಠಡಿಗೆ ಕರೆದುಕೊಂಡು ಹೋಗಿ ತನಗೆ ಈ ಮದುವೆ ಇಷ್ಟವಿಲ್ಲ. ಬೇರೆ ಪ್ರಪೋಸಲ್‌ ಇಷ್ಟಪಟ್ಟಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಮದುವೆಗೆ ಬಂದಿದ್ದ ಅತಿಥಿಗಳಿಗೂ ಅಘಾತವಾಗಿತ್ತು.

ಸುಮಾರು 1,000 ಮಂದಿಗೆ ಊಟೋಪಾಚಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಿನಿಮಾದಲ್ಲಿ ತೋರುತ್ತಿದ್ದ ಘಟನೆ ನೈಜವಾಗಿ ನೋಡಿದ ಆಮಂತ್ರಿತರು ಆಶ್ಚರ್ಯಪಟ್ಟರು. ಕೊನೆಗೆ ಬ್ರಹ್ಮಾವರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಎರಡೂ ಕಡೆಯವರು ಖರ್ಚಿನ ಸಮಪಾಲು ಹಾಕಲು ಒಪ್ಪುವುದರೊಂದಿಗೆ ಪ್ರಕರಣ ಮುಕ್ತಾಯಗೊಂಡಿತು.

- Advertisement -

Related news

error: Content is protected !!