- Advertisement -
- Advertisement -
ಭಟ್ಕಳ : ಬಂದರಿನಲ್ಲಿ ಲಂಗರು ಹಾಕಿದ್ದ ನಾಲ್ಕು ಬೋಟುಗಳು ಪಲ್ಟಿಯಾಗಿ ಮುಳಿಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.
ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದು ನಿನ್ನೆ ರಾತ್ರಿ ಸುರಿದ ಮಳೆಯಿಂದ ಮತ್ತಷ್ಟು ಹೂಳು ಸಂಗ್ರಹವಾಗಿದ್ದು ಭಟ್ಕಳದ ದುರ್ಗಾಂಬಿಕಾ ದೇವಿ, ಶ್ರೀ ನಿತ್ಯಾನಂದ, ಜೈನ ಜಟಗಾ, ಗಗನ 3 ಹೆಸರಿನ ಬೋಟುಗಳು ನೀರಿನಲ್ಲಿ ಮುಳುಗಿ ಲಕ್ಷಾಂತರ ರುಪಾಯಿ ಹಾನಿಸಂಭವಿಸಿದೆ. ಮುಳುಗಿದ ಬೋಟುಗಳನ್ನು ಸ್ಥಳೀಯ ಮೀನುಗಾರರ ಸಹಾಯದಿಂದ ಮೇಲೆತ್ತಲಾಗುತಿದ್ದು ಒಂದು ಬೋಟ್ ಅನ್ನು ರಕ್ಷಣೆ ಮಾಡಗಿದೆ.
- Advertisement -