- Advertisement -
- Advertisement -



ಮಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ ಮಾಡಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ.

ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಸೈಗೋಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿಮಾಡಿದ್ದು, ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಸೈಗೋಳಿ ನಿವಾಸಿ ದಾಮೋದರ ಎಂಬುವವರ ಪುತ್ರ ಶರಣ್ (24) ಹಾಗೂ ಹರೇಕಳದ ಗೋಪಾಲಕೃಷ್ಣ ಎಂಬುವವರ ಪುತ್ರ ಸುಜಿತ್ (26) ಎನ್ನಲಾಗಿದೆ. ವೈಯಕ್ತಿಕ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ತಿಳಿದು ಬಂದಿದೆ.



- Advertisement -