Tuesday, July 1, 2025
spot_imgspot_img
spot_imgspot_img

ಮಂಗಳೂರು: ಗಾಂಜಾ ಸೇವಿಸಿ ತಿರುಗಾಡುತ್ತಿದ್ದ ಕೇರಳ ಮೂಲದ ಮೂವರು ಪೊಲೀಸ್ ವಶಕ್ಕೆ

- Advertisement -
- Advertisement -

ಮಂಗಳೂರು: ಮಾದಕ ವಸ್ತು ಸೇವಿಸಿ ಆರೋಪದಡಿಯಲ್ಲಿ ಮೂವರು ಯುವಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡ ಘಟನೆ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯಲ್ಲಿ ಮೇ 10 ರಂದು ನಡೆದಿದೆ.

ಕೇರಳದ ಬಿಲಾಲ್ ಅಹ್ಮದ್(19), ಸನು(21) ಮತ್ತು ಅಮೆನ್ ಅರ್ಶದ್(20) ಮಾದಕ ದ್ರವ್ಯ ಸೇವನೆ ತಪಾಸಣೆ ವೇಳೆ ಸಿಕ್ಕಿ ಬಿದ್ದವರು.

ಕರಂಗಲ್ಪಾಡಿ ಬಳಿ ಅಪಾರ್ಟ್‌ಮೆಂಟ್‌ನಲ್ಲಿದ್ದುಕೊಂಡು ನಾಲ್ವರು ಮಾದಕ ವಸ್ತು ಸೇವಿಸಿ ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದಾರೆ ಎಂದು ಮಂಗಳವಾರ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಈ ಪೈಕಿ ಮೂವರು ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!