Saturday, June 28, 2025
spot_imgspot_img
spot_imgspot_img

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ನಿಷೇಧಿತ ಪಿಎಫ್‌ಐ ಸಂಘಟನೆಯ ಶರೀಫ್ ಮತ್ತು ಮಸೂದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್‌ಐಎ

- Advertisement -
- Advertisement -
vtv vitla

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.

‘ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಡಾಜೆ ಮಹಮ್ಮದ್‌ ಶರೀಫ್‌ ಮತ್ತು ನೆಕ್ಕಿಲಾಡಿಯ ಮಸೂದ್‌ ಕೆ.ಎ ಎಂಬಾತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು. ಇವರಿಬ್ಬರ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದೆ. ಮಾತ್ರವಲ್ಲದೇ ಇವರಿಬ್ಬರ ಮಾಹಿತಿ ನೀಡುವವರನ್ನು ಗೌಪ್ಯವಾಗಿಡಲಾಗುವುದು ಎಂದೂ ಎನ್‌ಐಎ ತಿಳಿಸಿದೆ.

ಈ ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ಎರಡೂವರೆ ತಿಂಗಳ ಹಿಂದೆಯೇ ಬಹುಮಾನ ಘೋಷಣೆ ಮಾಡಿತ್ತು. ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದ ಮೊಹಮ್ಮದ್‌ ಮುಸ್ತಾಫ ಎಸ್‌. ಅಲಿಯಾಸ್‌ ಮುಸ್ತಾಫ ಪೈಚಾರು ಹಾಗೂ ಕೊಡಗು ಜಿಲ್ಲೆಯ ಮಡಿಕೇರಿಯ ತುಫೈಲ್‌ ಎಂ.ಎಚ್ ಅವರ ಪತ್ತೆಗೆ ನೆರವಾದವರಿಗೆ ತಲಾ 5 ಲಕ್ಷ ಹಾಗೂ ಸುಳ್ಯದ ಕಲ್ಲುಮುಟ್ಟು ಮನೆ ನಿವಾಸಿ ಉಮ್ಮರ್‌ ಫಾರೂಕ್‌ ಎಂ.ಆರ್‌. ಅಲಿಯಾಸ್‌ ಉಮ್ಮರ್‌ ಹಾಗೂ ಬೆಳ್ಳಾರೆ ಗ್ರಾಮದ ಅಬೂಬಕ್ಕರ್‌ ಸಿದ್ಧಿಕ್‌ ಅಲಿಯಾಸ್ ಪೇಂಟರ್‌ ಸಿದ್ಧಿಕ್‌ ಪತ್ತೆಗೆ ನೆರವಾದವರಿಗೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ತಿಳಿಸಿತ್ತು.

- Advertisement -

Related news

error: Content is protected !!