- Advertisement -
- Advertisement -


ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾದ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಸ್ಮಾರಕಕ್ಕೆ ಇಂದು ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರೆ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
2010 ರಲ್ಲಿ ದುಬೈನಿಂದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವಿಮಾನ ಅಪಘಾತಕ್ಕೀ ಡಾಗಿ, 166 ಪ್ರಯಾಣಿಕರಲ್ಲಿ 158ಮಂದಿ ಮೃತ ಪಟ್ಟಿದ್ದರು.


- Advertisement -








