Sunday, June 29, 2025
spot_imgspot_img
spot_imgspot_img

ಮಂಗಳೂರು: ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಸಮುದ್ರ ಪೂಜೆ

- Advertisement -
- Advertisement -
driving

ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಸ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಭಾನುವಾರ ನಡೆದ ಸಮುದ್ರ ಪೂಜೆಯ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಿತ್ರಪಟ್ಟಣ ಮೊಗವೀರ ಸಮಾಜದ ಅಧ್ಯಕ್ಷ ರವೀಂದ್ರ ಕರ್ಕೇರ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸುರೇಶ್ ಕರ್ಕೇರ, ಸ್ಥಳೀಯ ಕಾರ್ಪೋರೇಟರ್ ಶೋಭಾ ರಾಜೇಶ್, ರಾಮ ಮಂದಿರದ ಅಧ್ಯಕ್ಷ ಪ್ರದೀಪ್ ಕುಂದರ್, ಊರಿನ ಗುರಿಕಾರರಾದ ಗಂಗಾಧರ್ ಗುರಿಕಾರ.

ಹಿರಿಯರಾದ ದಿನಕರ್ ಎಂ, ಮಹಿಳಾ ಸಮಾಜದ ಅಧ್ಯಕ್ಷ ಕವಿತಾ ಶರತ್, ರಾಜೇಶ್ ಪುತ್ರನ್ ಮುಂಬೈ ಸಮಿತಿಯ ಹಿರಿಯರಾದ ನಾರಾಯಣ ಬಂಗೇರ ಮಿತ್ರಪಟ್ಟಣ ಮೀನುಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ವಸಂತ್ ಸುವರ್ಣ, ಪ್ರಮುಖರಾದ ಸುನಿಲ್ ಸಾಲಿಯಾನ್ ಹಾಗೂ ಮೊಗವೀರ ಸಮಾಜದ ಎಲ್ಲಾ ಬಾಂಧವರು ಉಪಸ್ಥಿತರಿದ್ದರು.

- Advertisement -

Related news

error: Content is protected !!