Sunday, June 29, 2025
spot_imgspot_img
spot_imgspot_img

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

- Advertisement -
- Advertisement -
astr

ಮಂಗಳೂರು: ನಗರದ ಮಿನಿವಿಧಾನ ಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಶಿವಾನಂದ ನಾಟೇಕರ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಎನ್‌ಒಸಿಗಾಗಿ ನಾಗರಿಕರೊಬ್ಬರಿಂದ ಲಂಚ ಕೇಳಿ 4700 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ.

ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದಾಗಿ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ಸಿಕ್ಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.

- Advertisement -

Related news

error: Content is protected !!