Saturday, June 28, 2025
spot_imgspot_img
spot_imgspot_img

ಮಂಗಳೂರು: ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆ…!

- Advertisement -
- Advertisement -
vtv vitla

ಮಂಗಳೂರು: ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆಯಾಗಿದ್ದಾರೆ.

ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಚಲುವರಾಜು ಅವರಿಗೆ ನೀಡಲಾಗಿದೆ.

ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂ ತರಿಸಲು ಸೂಚಿಸಲಾಗಿದೆ.

- Advertisement -

Related news

error: Content is protected !!