- Advertisement -
- Advertisement -



ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಆದಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
- ವಿಟ್ಲ: ಅನಾರೋಗ್ಯದಿಂದ ಯುವಕ ನಿಧನ
- ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು
- ಮಂಜೇಶ್ವರ : ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆ
- ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆ
- ಮನೆಯಲ್ಲಿ ಮಲಗಿದ್ದ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ತಾಯಿಯ ಸ್ನೇಹಿತೆಯಿಂದ ಈ ಕೃತ್ಯ- ಮಹಿಳೆಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
- Advertisement -








