Sunday, June 29, 2025
spot_imgspot_img
spot_imgspot_img

ಮಂಗಳೂರು: ಹಿಜಾಬ್ ಪರ ಗೋಡೆ ಬರಹ – ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಕಿಡಿಗೇಡಿಗಳು ಹಿಜಾಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. “ಹಿಜಾಬ್ ಮೂವ್ ಮೆಂಟ್”, “ಹಿಜಾಬ್ ಈಸ್ ಅವರ್ ರೈಟ್” ಎಂಬ ಗೋಡೆ ಬರಹ ಪತ್ತೆಯಾಗಿದೆ.

ಈ ಸುದ್ದಿ ತಿಳಿಯುತ್ತಿದ್ತಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು ಜಮಾಯಿಸಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ವೃತ್ತನಿರೀಕ್ಷಕ ಶರಣಬಸವ ಪಾಟೀಲ್ ಭೇಟಿ ನೀಡಿದ್ದು, ಯುವಕರ ಮನವೊಲಿಕೆ ಕಾರ್ಯ ಮಾಡಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!