Sunday, June 29, 2025
spot_imgspot_img
spot_imgspot_img

ಸ್ಕೂಟಿ ಸ್ಕಿಡ್‌ ಆಗಿ ಕರೆಂಟ್‌ ಕಂಬ ಹಿಡಿದ ಯುವತಿ; ವಿದ್ಯುತ್‌ ಹರಿದು ಸಾವು

- Advertisement -
- Advertisement -

ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಘಟನೆ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ.

23 ವರ್ಷದ ಅಕಿಲ ಮೃತಪಟ್ಟಿರುವ ಯುವತಿ. ಇವರು ಕೆಲಸ ಮುಗಿಸಿ ಮನೆಗೆ ಹೊರಡುವಾಗ ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಿದೆ. ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಿದ್ದು, ಮೈಮೇಲೆ ವಿದ್ಯುತ್ ಹರಿದಿದೆ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ವೈಟ್ ಫೀಲ್ಡ್ -ಮಾರತಹಳ್ಳಿ ಮುಖ್ಯರಸ್ತೆಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಕಾರಣ ರಸ್ತೆಯಲ್ಲಿ ನೀರು ನಿಂತಿತ್ತು. ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದರು. ಸ್ಕೂಟಿ ಸ್ಕಿಡ್‌ ಆಗಿದ್ದಕ್ಕೆ ಕರೆಂಟ್‌ ಕಂಬ ಹಿಡಿದ ಯುವತಿಯ ಮೈ ಮೇಲೆ ವಿದ್ಯುತ್‌ ಹರಿದು ಸಾವನ್ನಪ್ಪಿದ್ದಾಳೆ

ಕಂಬದಲ್ಲಿದ್ದ ವೈರ್​ಗಳು ತೆರೆದುಕೊಂಡಿವೆ. ವಿದ್ಯುತ್ ಕಂಬಗಳ ನಿರ್ವಹಣೆ ಸರಿಯಾಗಿ ಇಲ್ಲದೇ ಇರುವುದೇ ದುರ್ಘಟನೆಗೆ ಕಾರಣ ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವೈದೇಹಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮನೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!