Saturday, June 28, 2025
spot_imgspot_img
spot_imgspot_img

ಮುರುಘಾ ಶ್ರೀಗಳು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ; ಬಿ.ಎಸ್‌ ಯಡಿಯೂರಪ್ಪ

- Advertisement -
- Advertisement -
vtv vitla

ಉಡುಪಿ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಮುರುಘಾ ಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಇಂದು ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉಡುಪಿಯಿಂದ ಶಿರಹಟ್ಟಿಗೆ ತೆರಳಿದ ಸಂದರ್ಭದಲ್ಲಿ ಉಡುಪಿಯ ಹೆಲಿಪ್ಯಾಡ್​ ನಲ್ಲಿ ಬಿಎಸ್​ವೈ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಸ್​ವೈ ಜತೆ ಸಿಎಂ ಬೊಮ್ಮಾಯಿ ಮತ್ತು ಕಾರಜೋಳ ಸಹ ಶಿರಹಟ್ಟಿಗೆ ಪ್ರಯಾಣ ಮಾಡಿದರು.

- Advertisement -

Related news

error: Content is protected !!