Wednesday, April 23, 2025
spot_imgspot_img
spot_imgspot_img

ಮುರುಡೇಶ್ವರ ಶಿವನ ಮೂರ್ತಿಯನ್ನು ವಿಕೃತಗೊಳಿಸಿದ ಐಸಿಸ್ ಪತ್ರಿಕೆ..!! ಎಲ್ಲೆಡೆ ಆಕ್ರೋಶ

- Advertisement -
- Advertisement -
vtv vitla
vtv vitla
vtv vitla
vtv vitla

ಕಾರವಾರ: ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಬೃಹತ್ ಈಶ್ವರನ ಪ್ರತಿಮೆಯ ಚಿತ್ರ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಉಗ್ರ ಸಂಘಟನೆ ದಾಳಿಯ ಪಿತೂರಿ ಎಂಬ ಅನುಮಾನ ಕಾಡಿದೆ.

ಮುರುಡೇಶ್ವರದಲ್ಲಿನ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆಯ ಐಸಿಸ್ ಪತ್ರಿಕೆಯಲ್ಲಿ ಪ್ರಕಟಿಸಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಮಾದ್ಯಮ ಸುದ್ದಿ ವಿಶ್ಲೇಷಕಾ ಅಂಶುಲ್ ಸಕ್ಸೇನಾ ಎಂಬುವವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದಾರೆ. ಐಸಿಸ್ ಮುಖವಾಣಿ ಪತ್ರಿಕೆ ದಿ ವಾಯ್ಸ್ ಆಫ್ ಹಿಂದ್ ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ಇದು ನಕಲಿ ದೇವರನ್ನು ಒಡೆಯುವ ಸಮಯ ಎಂಬ ವಾಕ್ಯವನ್ನು ಬರೆಯಲಾಗಿದೆ.

vtv vitla
vtv vitla

ಶಿವನ ಪ್ರತಿಮೆಯ ತಲೆಯನ್ನು ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ. ಇನ್ನು ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

vtv vitla
- Advertisement -

Related news

error: Content is protected !!