- Advertisement -
- Advertisement -
ಮುಲ್ಕಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಲಿಂಗಪ್ಪಯ್ಯ ಕಾಡು ನಿವಾಸಿ ಭರತ್ ಭಂಡಾರಿ (30) ಎನ್ನಲಾಗಿದೆ.
ಭರತ್ ಭಂಡಾರಿ ಮನೆಯ ಹತ್ತಿರದ ಕಾಡಿನಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಭರತ್ ಕೆ.ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡಿನಲ್ಲಿ ಸೆಲೂನ್ ಶಾಪ್ ಇಟ್ಟುಕೊಂಡಿದ್ದು. ಜೀವನ ಸಾಗಿಸುತ್ತಿದ್ದ. ಮೃತ ಭರತ್ ಪತ್ನಿ ಹಾಗೂ ಓರ್ವ ಎರಡು ವರ್ಷ ಪ್ರಾಯದ ಪುತ್ರಿಯನ್ನು ಅಗಲಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿದ್ದಾರೆ.
- Advertisement -