Sunday, June 29, 2025
spot_imgspot_img
spot_imgspot_img

ವಿಟ್ಲ: ಆಜಾದಿ ಕಾ ಅಮೃತ ಮಹೋತ್ಸವ ಸಮಾರೋಪದ ಅಂಗವಾಗಿ ವಿಟ್ಲ ಪೇಟೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಜಿಲ್ಲಾಡಳಿತ ದ ಕ ಜಿಲ್ಲೆ, ವಿಟ್ಲ ಪಟ್ಟಣ ಪಂಚಾಯತ್ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇವರುಗಳ ಸಂಯುಕ್ತ ಆಶ್ರಯದಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ” ಸ್ವಚ್ಛ ಭಾರತ ಕಾರ್ಯಕ್ರಮದ ಸಮಾರೋಪದ ಅಂಗವಾಗಿ ವಿಟ್ಲ ಪೇಟೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ ಮತ್ತು ಸಿಬ್ಬಂಧಿಗಳು, ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಕೋಶಾಧಿಕಾರಿ ಗಂಗಾಧರ್ ಮತ್ತು ಇತರ ಸದಸ್ಯರು ಭಾಗವಹಿಸಿದ್ದರು. ಲಯನ್ಸ್ ಜಿಲ್ಲಾ ಪ್ರಾಂತೀಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪ್ರತಿಜ್ಙಾವಿಧಿ ನೆರವೇರಿಸಿದರು.

- Advertisement -

Related news

error: Content is protected !!