- Advertisement -
- Advertisement -
ವಿಟ್ಲ: ಎಸ್ಕೆಎಸ್ಸೆಸ್ಸೆಫ್ ವಿಟ್ಲ ವಲಯದ ವತಿಯಿಂದ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಪ್ರವಾದಿ ಮಹಮ್ಮದ್ ರವರನ್ನು ಅವಹೇಳಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆಯು ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ನಡೆಯಿತು.
ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಸ್ವಸ್ಥ ಕೆಡಿಸುವವರ ವಿರುದ್ಧ ಹಾಗೂ ಪ್ರವಾದಿಯವರನ್ನು ನಿಂದಿಸಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವವರ ಮೇಲೆ ತಕ್ಷಣ ಕ್ರಮ ಜರಗಿಸುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.
ಯುವ ಚಿಂತಕ,ಬರಹಗಾರ ಉವೈಸ್ ತೋಕೆ ಮುಖ್ಯ ಪ್ರಭಾಷಣ ಮಾಡಿದರು. ಸಾಲೆತ್ರೂರು ರೇಂಜ್ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಇಬ್ರಾಹಿಂ ಮುಸ್ಲಿಯಾರ್ ಪ್ರಸ್ತಾವನೆ ಗೈದರು. ವಿಟ್ಲ ವಲಯದ ಪ್ರಧಾನ ಕಾರ್ಯದರ್ಶಿ ಕೆ.ಎ.ಎಂ.ಮಹಮ್ಮದ್ ರಫೀಕ್ ಮುಸ್ಲಿಯಾರ್ ಸ್ವಾಗತಿಸಿ, ವಂದಿಸಿದರು. ವಿವಿಧ ವಲಯಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
- Advertisement -