- Advertisement -
- Advertisement -



ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು -ಎ ಒಕ್ಕೂಟದ ಮುಂದಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಕಲ್ಲಡ್ಕ ವಲಯದ ಅಧ್ಯಕ್ಷ ಈಶ್ವರ ನಾಯ್ಕ, ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ, ಮತ್ತು ಸೇವಾ ಪ್ರತಿನಿಧಿ ಕೌಶಿತ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ನಡೆಯಿತು.

ಗೋಳ್ತಮಜಲು -ಎ ಒಕ್ಕೂಟದ ನೂತನ ಅಧ್ಯಕ್ಷರಾಗಿ ಈಶ್ವರ ನಾಯ್ಕ ಮುರಬೈಲು , ಉಪಾಧ್ಯಕ್ಷರಾಗಿ ಚಿದಾನಂದ ಪಟ್ಟೆಕೊಡಿ, ಕಾರ್ಯದರ್ಶಿಯಾಗಿ ವನಿತಾ ರಾಮನಗರ, ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮಣ ಗೋಳ್ತಮಜಲು, ಕೋಶಾಧಿಕಾರಿಯಾಗಿ ಸುಲೋಚನ ಬಲ್ಲೆಕೋಡಿ.
ಉಪಸಮಿತಿ ಸದಸ್ಯರಾಗಿ ಪ್ರಪುಲ್ಲ, ಎವ್ಲಿನ್ ಡಿಸೋಜ, ಭಾಗಿರತಿ, ಉದಯಕುಮಾರ್, ಲೋಕೇಶ್ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೋಳ್ತಮಜಲು- ಎ ಒಕ್ಕೂಟದ ಸ್ವಸಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.


- Advertisement -