Friday, June 27, 2025
spot_imgspot_img
spot_imgspot_img

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ, ಲಕ್ಷ ತುಳಸೀ ಅರ್ಚನೆ ಮತ್ತು ಪುಂಡಿ ಪಣವು ಸಮರ್ಪಣೆ

- Advertisement -
- Advertisement -

ವಿಟ್ಲ: ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ -ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಶುಭಾಶೀರ್ವಾದಗಳೊಂದಿಗೆ, ಕುಂಡಡ್ಕ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಉಪ ಸಮಿತಿಗಳ ಸಹಯೋಗದೊಂದಿಗೆ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ, ವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸೀ ಅರ್ಚನೆ ಮತ್ತು ಪುಂಡಿ ಪಣವು ಸಮರ್ಪಣೆ ಅದ್ಧೂರಿಯಾಗಿ ನಡೆಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಜೀವ ಮಠಂದೂರು, ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಹರ್ಷೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಇವರು ಆಗಮಿಸಿದ್ದರು. ಈ ವೇಳೆ ಕೃಷ್ಣಯ್ಯ ಕೆ ವಿಟ್ಲ ಅರಮನೆ, ಕುಡ್ವ ಮನೆತನದ ಯೋಗೀಶ್ ಕುಡ್ವ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಇದರ ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ಅಧ್ಯಕ್ಷ ಯತೀಶ್ ಹಡೀಲು ಸೇರಿದಂತೆ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಪದಾದಿಕಾರಿಗಳು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ತಂಡದ ಸದಸ್ಯರು, ಸಂಘ ಸಂಸ್ಥೆಗಳು, ದಾನಿಗಳು ಊರ ಮತ್ತು ಪರವೂರಿನ ಭಕ್ತರು ಕೈ ಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

- Advertisement -

Related news

error: Content is protected !!