- Advertisement -
- Advertisement -
ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹೋಬಳಿ ವ್ಯಾಪ್ತಿಯ 94 C / 94 CC ಹಕ್ಕುಪತ್ರ ವಿತರಣೆ ಹಾಗೂ ಅಕ್ರಮ ಸಕ್ರಮ ಸಮಿತಿ ಬೈಠಕ್ ಕಾರ್ಯಕ್ರಮವು ಫೆ. 7 ರಂದು ಚಂದಳಿಕೆ ಭಾರತ್ ಆಡಿಟೋರಿಯಂನಲ್ಲಿ ನಡೆಯಿತು.
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಪುರುಷೋತ್ತಮ ಮುಗ್ಲಿಮನೆ, ಪರಮೇಶ್ವರಿ ಭಟ್, ಬಂಟ್ವಾಳ ತಾಲೂಕು ತಹಶೀಲ್ದಾರ್ ದಯಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಟ್ಲ ನಾಡಕಚೇರಿ ಉಪತಹಶೀಲ್ದಾರ್ ವಿಜಯ ವಿಕ್ರಮ ಸ್ವಾಗತಿಸಿ, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿಟ್ಲ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮದ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಬಂಟ್ವಾಳ ತಾ.ಕಚೇರಿ ಸಿಬ್ಬಂದಿಗಳು ಸಹಕರಿಸಿದರು.
- Advertisement -