
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಯಾಗಿದ್ದಾರೆ. ಘಟನೆ ನಡೆದ 4 ಗಂಟೆಗಳಲ್ಲೇ ಆರೋಪಿಗಳ ಹೆಡೆಮುರಿಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಮಹಾಂತೇಶ್, ಮಂಜುನಾಥ್ ಎಂದು ಗುರುತಿಸಲಾಗಿದೆ. ಹತ್ಯೆ ನಂತರ ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಹತ್ಯೆ ಹೇಗಾಯ್ತು?
ಚಂದ್ರಶೇಖರ್ ಗುರೂಜಿ ಇಂದು ಹೋಟೆಲಿನಲ್ಲಿ ತಂಗಿದ್ದರು. ಹೋಟೆಲಿನಲ್ಲಿ ತಂಗಿದ್ದ ಇವರನ್ನು ಕರೆ ಮಾಡಿದ ಇಬ್ಬರು ರಿಸೆಪ್ಶನಿಸ್ಟ್ ಜಾಗಕ್ಕೆ ಬರಲು ಹೇಳಿದ್ದಾರೆ. ಗುರೂಜಿ ಇವರ ಬಳಿ ಬರುತ್ತಿದ್ದಂತೆ ಇಬ್ಬರು ಎದ್ದು ನಿಂತಿದ್ದಾರೆ. ಗುರೂಜಿ ಕುಳಿತ ಬಳಿಕ ಒಬ್ಬ ಆಶೀರ್ವಾದ ಪಡೆಯುವ ನಾಟಕ ಮಾಡಿದ್ದರೆ ಮತ್ತೊಬ್ಬ ನಿಂತಿದ್ದ. ಕೆಲ ಕ್ಷಣದಲ್ಲೇ ಮುಂದುಗಡೆ ನಿಂತಿದ್ದ ಯುವಕ ಚಾಕುವಿನಿಂದ ಇರಿದಿದ್ದಾನೆ.

ಈ ವೇಳೆ ಮತ್ತೊಬ್ಬ ಚಾಕುವಿನಿಂದ ಇರಿದಿದ್ದಾನೆ. ನಂತರ ಇಬ್ಬರು ಮನ ಬಂದಂತೆ ಇರಿದು ಬರ್ಬರವಾಘಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಒಟ್ಟು 20 ಸೆಕೆಂಡ್ನಲ್ಲಿ 60 ಬಾರಿ ಚಾಕುವಿನಿಂದ ಇರಿಯಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

