- Advertisement -
- Advertisement -
ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರಿನಲ್ಲಿ ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ಕಲ್ಮಕಾರು ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಾಲು ಸಾಗಾಟ ಮಾಡಲು ಈ ವಾಹನ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪಿಕಪ್ ನಲ್ಲಿದ್ದ ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -