Sunday, June 29, 2025
spot_imgspot_img
spot_imgspot_img

ಸುರತ್ಕಲ್‌ ಟೋಲ್‌ಗೇಟ್‌ ವಿರುದ್ದ ಪ್ರತಿಭಟನೆ; ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಪೊಲೀಸ್‌ ವಶಕ್ಕೆ

- Advertisement -
- Advertisement -

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದ ಹೊರವಲಯದ ಸುರತ್ಕಲ್ ಟೋಲ್ ಗೇಟ್ ಗೆ ಹೋರಾಟಗಾರರು ಮುತ್ತಿಗೆ ಹಾಕಿದು, ತಾತ್ಕಾಲಿಕವಾಗಿ ಟೋಲ್ ಸಂಗ್ರಹ ನಿಲ್ಲಿಸಲಾಗಿದೆ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಟೋಲ್‌ ಸಂಗ್ರಹ ನಿಲ್ಲಿಸಲಾಗಿದೆ.

ಆ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಧರಣಿಗೆ ತಾತ್ಕಾಲಿಕ ಜಯ ಸಿಕ್ಕಿದಂತಾಗಿದೆ. ಟೋಲ್ ವಿರುದ್ಧ ಹೋರಾಟಗಾರರಿಂದ ಮುತ್ತಿಗೆ ಹಾಕಲಾಗಿತ್ತು, ಈ ಹಿನ್ನೆಲೆಯಲ್ಲಿ ಸುರತ್ಕಲ್ ನಲ್ಲಿ ಟೋಲ್ ಸಂಗ್ರಹ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಹನಗಳು ಸುಗಮವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಪಕ್ಷಬೇಧ ಮರೆತು ಜನರು ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಮತ್ತೆ ಟೋಲ್‌ ಸಂಗ್ರಹವನ್ನು ಆರಂಭಿಸಲಾಗಿದೆ.

- Advertisement -

Related news

error: Content is protected !!