- Advertisement -
- Advertisement -


ಸುಳ್ಯ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಇಬ್ಬರು ಸಹೋದರಿಯರ ಮೃತದೇಹ ಸುಳ್ಯದ ಕೇನ್ಯ ಗ್ರಾಮದ ಸಮೀಪದ ಪಳ್ಳ ಎಂಬಲ್ಲಿನ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಕೇನ್ಯ ಗ್ರಾಮದ ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಸಿತಾ(14) ಮತ್ತು ಅವಂತಿಕಾ (10) ಎಂಬ ಬಾಲಕಿಯರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ ರವರು ತನ್ನ ಅಣ್ಣನ ಮನೆಗೆ ಬಂದಿದ್ದ ವೇಳೆ ಮಕ್ಕಳು ಸ್ನಾನಕ್ಕೆಂದು ನದಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
- Advertisement -