- Advertisement -
- Advertisement -


ಸುಳ್ಯ: ಗಾಂಧಿನಗರದಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಅಡಿಗೆ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಮೃಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತಪಟ್ಟ ವ್ಯಕ್ತಿಯನ್ನು ಉತ್ತರ ಕರ್ನಾಟಕದ ಮಂಜುನಾಥ ಎಂದು ಗುರುತಿಸಲಾಗಿದೆ.
ಕೂಲಿಕಾರ್ಮಿಕರಾಗಿದ್ದ ಮಂಜುನಾಥ ಗಾಂಧಿನಗರದಲ್ಲಿ ಬಾಡಿಗೆ ರೂಂ ನಲ್ಲಿದ್ದು, ತೆಂಗಿನ ಕಾಯಿ ಹೇರಿಕೊಂಡು ಬರುತ್ತಿದ್ದ ಲಾರಿಯ ಅಡಿಗೆ ಯುವಕ ಜಿಗಿದಿರುವುದು ಸಿ.ಸಿ. ಕ್ಯಾಮರಾ ದೃಶ್ಯದಲ್ಲಿ ಕಂಡು ಬಂದಿದ್ದು, ಆತ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಶಂಕಿಸಲಾಗಿದೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


- Advertisement -








