- Advertisement -
- Advertisement -
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ ಕೋರವಂಗಲ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ ಬಜಾಜ್ ಎನ್.ಎಸ್. 160 ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.
ಕಡೂರಿನಿಂದ ಜೋಡಿ ಕೃಷ್ಣಾಪುರ ಗ್ರಾಮಕ್ಕೆ ತೆರಳುತ್ತಿದ್ದ ಚಿದಾನಂದ್ ಅವರು ನಡುವೆ ಕೋರುವಂಗಲ ಗೇಟ್ ಬಳಿ ಬೈಕ್ ನಿಲ್ಲಿಸಿ ಸಿಹಿ ತಿನಿಸು ತರಲು ಬೇಕರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬೈಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೈಕ್ ಹೊತ್ತಿ ಉರಿಯುವುದನ್ನು ಕಂಡು ಬೈಕ್ ಸವಾರ ಹಾಗೂ ಮಾಲೀಕ ಚಿದಾನಂದ್ ಕಣ್ಣೀರಿಟ್ಟು ಯಾರಾದರೂ ಆರಿಸಿ ಎಂದು ಮನವಿ ಮಾಡಿದರು. ಆದರೆ, ಬೆಂಕಿಯ ಜ್ವಾಲೆ ಅಷ್ಟು ಹೊತ್ತಿಗೆ ಎಲ್ಲ ಕಡೆ ಆವರಿಸಿತ್ತು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -