- Advertisement -
- Advertisement -
ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪುತ್ತೂರಿನ ಹಿಂದೂ ವಿರೋಧಿ ಡಿ.ವೈ.ಎಸ್ಸಿ. ಗಾನ ಇವರನ್ನು ಕೂಡಲೇ ಪುತ್ತೂರಿನಿಂದ ವರ್ಗಾವಣೆ ಮತ್ತು ಪುತ್ತೂರಿನ ವಿದ್ಯಾರ್ಥಿಗಳ ಮೇಲೆ ವಿನಾಃ ಕಾರಣ ಕೇಸು ದಾಖಲಿಸಿ, ರೌಡಿ ಶೀಟರ್ ದಾಖಲೆ ಮಾಡಿದ್ದನ್ನು ರದ್ದು ಮಾಡಬೇಕಾಗಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿಂ.ಜಾ.ವೇ.ಪುತ್ತೂರು ತಾಲೂಕು ಗೌರವಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಭಂಡಾರಿ,. ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್. ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸಾಜ ರಾಧಾಕೃಷ್ಣ ಆಳ್ವ, ಹಿಂಜಾವೇ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ಪಂಜಿಗ ಮತ್ತಿತರರು ಉಪಸ್ಥಿತರಿದ್ದರು.
- Advertisement -