Sunday, June 29, 2025
spot_imgspot_img
spot_imgspot_img

ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಕೆ

- Advertisement -
- Advertisement -

ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ: ಪುತ್ತೂರಿನಲ್ಲಿ ಮೊಳಗಿದ ಕೇಸರಿ ಕಲರವ

ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಇಂದು ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭ ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು.

ಬೆಳಗ್ಗೆ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.

ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡ್, ವಾದ್ಯದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರದ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆ ಮೂಲಕ ಸಾಗಿಬಂದ ಮೆರವಣಿಗೆಯು ಕೇಸರಿಮಯವಾಗಿತ್ತು. ಮೆರವಣಿಗೆಯಲ್ಲಿ ಸಾಗಿಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

- Advertisement -

Related news

error: Content is protected !!